ದಿಗಂತ ವರದಿ ಹುಬ್ಬಳ್ಳಿ:
ಮುಡಾ ಹಗರಣಕ್ಕೆ ಸಂಬಂಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಶಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ತಮ್ಮ ಜೀವನ ತೆರೆದ ಪುಸ್ತಕ ಎನ್ನುವ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಕಾನೂನು ತಜ್ಞರ ಸಲಹೆ ಪಡೆದು, ಅಳೆದು-ತೂಗಿ ತನಿಖೆ ನಡೆಯಬೇಖು ಎಂಬ ಉದ್ದೇಶದಿಂದ ಈ ಕಾರ್ಯ ಮಾಡಿದ್ದಾರೆ. ಪ್ರಕರಣ ಗಂಭೀರವಿರುವ ಹಿನ್ನೆಲೆ ಇದು ಸರಿಯಾದ ಕ್ರಮವಾಗಿದೆ. ಸಾರ್ವಜನಿಕ ಜೀವನದಲ್ಲಿ ಇರುವವರು ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ರಾಜ್ಯಪಾಲರು ಇಟ್ಟಿರುವ ದಿಟ್ಟ ಹೆಜ್ಜೆಯಾಗಿದೆ ಎಂದರು.
ಯಾವುದೇ ಜನಪ್ರತಿನಿಯಾಗಲಿ ತಮ್ಮ ಮೇಲೆ ಆರೋಪ ಬಂದರೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಸಾರ್ವಜನಿಕರ ಭಾಗವಾಗಿರುವುದರಿಂದ ನೈತಿಕ ಹೊಣೆ ಹೊರಬೇಕಾಗುತ್ತದೆ. ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಿದ್ದರು. ಅದೇ ರೀತಿ ಸಿದ್ದರಾಮಯ್ಯ ನಡೆದುಕೊಳ್ಳಲಿ ಎಂದು ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ ತನಿಖೆಗೆ ಯಾವುದೇ ಅಡೆತಡೆ ಮಾಡದೇ ಸಹಕರಿಸಸಬೇಕು. ತಪ್ಪು ಮಾಡದಿದ್ದಲ್ಲಿ ಯಾವ ತನಿಖೆ ಏಜೆನ್ಸಿಯಿಂದಲೂ ತೊಂದರೆ ಆಗುವುದಿಲ್ಲ. ಈಗಲೂ ಸಿದ್ದರಾಮಯ್ಯ ಕಾನೂನು ಹೋರಾಟ ಮಾಡಲು ಸ್ವತಂತ್ರರಾಗಿದ್ದಾರೆ. ಅದಕ್ಕೆ ನಮ್ಮದೇನೂ ತಕರಾರು ಇಲ್ಲ ಎಂದರು.