ಹೊಸದಿಗಂತ ಮಂಡ್ಯ :
ಇನ್ನೂ ಮೂರೂವರೆ ವರ್ಷಗಳ ಕಾಲವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವ ಅನುಮಾನವೂ ಬೇಡ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ನಗರದ ಕುರುಬರ ಸಂಘದ ಆವರಣದಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆ. 2028ರವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಪರೋಕ್ಷವಾಗಿ ಸಿಎಂ ಖುರ್ಚಿ ಖಾಲಿ ಇಲ್ಲ ಎನ್ನುವ ಸಂದೇಶವನ್ನು ನೀಡಿದರು.