ಲಿಂಗಾಯತ ಸಿಎಂ ಕುರಿತ ಸಿದ್ದರಾಮಯ್ಯನವರ ಹೇಳಿಕೆ ತಿರುಚಿಲ್ಲ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿದ್ದರಾಮಯ್ಯನವರ ಲಿಂಗಾಯತ ಸಿಎಂ ಹೇಳಿಕೆಯನ್ನು ತಿರುಚಲಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈಗಾಗಲೆ ಅಧಿಕಾರದಲ್ಲಿರುವ ಲಿಂಗಾಯತ ಸಿಎಂ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತಗೊಳಿಸಿ ನಾನು ಆ ಮಾತನ್ನು ಹೇಳಿದ್ದೆ, ಅದನ್ನು ಬಿಜೆಪಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಅದಕ್ಕೆ ಬೊಮ್ಮಾಯಿಯವರು ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ತಿರುಚಲಾಗಿಲ್ಲ, ಅವರು ಮಾತನಾಡಿದ ವಿಡಿಯೋ ಇದೆ. ಸಿದ್ದರಾಮಯ್ಯನವರೇ ತಮ್ಮ ಹೇಳಿಕೆ ಬದಲಾಯಿಸಿದ್ದಾರೆ. ಈಗಿನ ಕಾಲದಲ್ಲಿ ಹೇಳಿಕೆಗಳನ್ನು ತಿರುಚಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!