Thursday, March 30, 2023

Latest Posts

ಸಿದ್ದರಾಮಯ್ಯರಿಗೆ ಅಲೆದಾಟ ತಪ್ಪಿದ್ದಲ್ಲ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಮಡಿಕೇರಿ:

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅಲೆದಾಟ ತಪ್ಪಿದ್ದಲ್ಲ. ಕ್ಷೇತ್ರ ಹುಡುಕುವ ಅಲೆದಾಟ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.
ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ 23 ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವವನ್ನು ಶನಿವಾರ ಉದ್ಘಾಟಿಸಿದ ಬಳಿಕ
ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋದಾಗಲೇ
ಸಂಶಯ ಮೂಡಿತ್ತು. ಅಲ್ಲಿ ಅವರು ಜಯ ಗಳಿಸುವುದಿಲ್ಲ ಎಂದು ಎಲ್ಲಾ ವರದಿಗಳು ಹೇಳಿದ್ದವು. ಹಾಗಾಗಿ ಹೈಕಮಾಂಡ್ ಅವರಿಗೆ ಅಲ್ಲಿ ಸ್ಪರ್ಧಿಸುವುದು ಬೇಡ ಎಂದು ಹೇಳಿರಬಹುದು ಎಂದು ಬೊಮ್ಮಾಯಿ ನುಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!