ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮೋತ್ಸವ ಆಚರಿಸಿಕೊಳ್ಳುತ್ತಿರುವ ದಾವಣಗೆರೆಯಲ್ಲಿ ಎಲ್ಲೆಲ್ಲೂ ಟ್ರಾಫಿಕ್ ಜಾಮ್ ನಾಗರೀಕರನ್ನು ಹೈರಾಣಾಗಿಸಿದೆ. ಒಂದೆಡೆ ಮಳೆ, ಮೋಡದ ವಾತಾವರಣ, ಇನ್ನೊಂದೆಡೆ ಕಾರ್ಯಕ್ರಮಕ್ಕೆಆಗಮಿಸುತ್ತಿರುವ ಸಿದ್ದು ಅಭಿಮಾನಿಗಳ ದಂಡು ಎಲ್ಲೆಲ್ಲೂ ಸಂಚಾರ, ವಾಹನ ದಟ್ಟಣೆ ಕಂಡುಬರುತ್ತಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರೋಬ್ಬರಿ 15 ಕಿಲೋಮೀಟರ್ ವಾಹನ ದಟ್ಟಣೆ ಕಾಣಿಸಿಕೊಂಡಿತ್ತು. ಈ ನಡುವೆ ಟ್ರಾಫಿಕ್ ಜಾಮ್ ನಿಂದ ಸಂಕಷ್ಟಕ್ಕೊಳಗಾದ ಸಿದ್ದು ಅಭಿಮಾನಿಗಳು ವೇದಿಕೆಯಿಂದ ಸುಮಾರು 4-5 ಕಿಲೋ ಮೀಟರ್ ದೂರದಲ್ಲಿ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲೇ ಕಾರ್ಯಕ್ರಮ ನಡೆಯುವ ಸ್ಥಳದತ್ತ ಆಗಮಿಸುತ್ತಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ರಾಜ್ಯದ ವಿವಿಧೆಡೆಗಳಿಂದ 8,000 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಅಗಮಿಸುವವರಿಗೆ ಉಪಾಹಾರದ ವ್ಯವಸ್ಥೆಯಾಗಿ 150 ಕೌಂಟರ್ಗಳಲ್ಲಿ ಬಿಸಿಬೇಳೆ ಬಾತ್ ನೀಡಲಾಗುತ್ತಿದೆ.