ಸಿದ್ದೇಶ್ವರ ಶ್ರೀಗಳು ವಿಧಿವಶ: ನುಡಿನಮನ ಸಲ್ಲಿಸಿದ ಈಶ್ವರ ಖಂಡ್ರೆ

ಹೊಸದಿಗಂತ ವರದಿ ಕಲಬುರಗಿ: 

ನುಡಿದಂತೆ ನಡೆದ ದೇವರು,ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಶ್ರೀಗಳ ಆಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಮಂಗಳವಾರ ನಗರದ ಜಗತ್ ವೃತ್ತದ ಬಸವೇಶ್ವರ ಮೂರ್ತಿಯ ಆವರಣದಲ್ಲಿ ಆಧ್ಯಾತ್ಮಿಕ ಪ್ರವಚನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು. ಶ್ರೀಗಳು ಆಡಂಬರವಿಲ್ಲದೇ ಸರಳ ಜೀವನ ನಡೆಸಿದವರು.ಪ್ರವಚನ ಮೂಲಕ ನಾಡಿನ ಜನರಿಗೆ ಮಾರ್ಗದರ್ಶನ ಮಾಡಿ, ಆದರ್ಶಗಳನ್ನು ಬಿಟ್ಟು ನಮ್ಮನ್ನು ಅಗಲಿದ್ದಾರೆ ಎಂದರು.

ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಶ್ರೀಶೈಲಂ ಮಾತನಾಡಿ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಆಧ್ಯಾತ್ಮಿಕ ಸಂದೇಶವನ್ನು ನೀಡಿದ್ದಾರೆ. ಪ್ರಶಸ್ತಿ ಪುರಸ್ಕಾರ ತಿರಸ್ಕರಿಸಿ, ಸರಳತೆ ಮೆರೆದ ಸಂತರಿವರು.

ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ, ಉತ್ತರ ಕರ್ನಾಟಕದ ಭಾಗಗಳಲ್ಲಿ ಅತ್ಯಂತ ಹೆಚ್ಚಿನ ಭಾಗಗಳಲ್ಲಿ ತಮ್ಮ ಪ್ರವಚನ ಮೂಲಕವೇ ಭಕ್ತವೃಂದವನ್ನು ಸಂಪಾದನೆ ಮಾಡಿದ ಶೀಗಳ ಅಗಲಿಕೆ ಮನಸ್ಸಿಗೆ ಬಹಳ ದುಖಃವಾಗಿದೆ. ಸಂತರು ನಗರದ ಶಹಾಬಜಾರ ಸುಲಫಲ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ದಶ೯ಶನದ ಭಾಗ್ಯ ನನಗೆ ದೊರೆತಿದ್ದು,ನನ್ನ ಸೌಭಾಗ್ಯ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!