ಹೊಸದಿಗಂತ ವರದಿ,ವಿಜಯಪುರ :
ನಗರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಮಲ್ಲಣ್ಣ ಮೂಲಿಮನಿ ಹೇಳಿದರು.
ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಅವರು ಈ ಬಗ್ಗೆ ಭಾನುವಾರ ಸಂಜೆ ಮಾಹಿತಿ ನೀಡಿ, ಬೆಳಗ್ಗೆಯಿಂದ ನಾರ್ಮಲ್ ಇದ್ದಾರೆ. ಪಲ್ಸ್, ಬಿಪಿ, ಉಸಿರಾಟ ಸಹಜವಾಗಿದೆ. ಇನ್ನು ಶ್ರೀಗಳು ಗಂಜಿ ಕುಡಿದಿದ್ದಾರೆ. ನಿನ್ನೆ ಆಕ್ಸಿಜನ್ ಕಡಿಮೆಯಾಗಿತ್ತು. ಸದ್ಯ ನಾರ್ಮಲ್ ಇದೆ. ಕಳೆದ ಕೆಲ ದಿನಗಳಿಂದ ಊಟ ಮಾಡಿಲ್ಲ. ಹೀಗಾಗಿ ಅವರು ಹೊರಗೆ ಬರಲಾಗುತ್ತಿಲ್ಲ ಎಂದರು.
ಈ ಸಂದರ್ಭ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಇದ್ದರು.