ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ನಲ್ಲೂ ಇನ್ನೂ ಅಂತಿಮವಾಗಿಲ್ಲ.
ಇದೇ ವಿಚಾರವಾಗಿ ಪ್ರಬಲ ಆಕಾಂಕ್ಷಿಗಳಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೊದಲಿಗೆ ಡಿ.ಕೆ.ಶಿವಕುಮಾರ್ ಐದು ಗಂಟೆ ಸುಮಾರಿಗೆ ಖರ್ಗೆಯವರ ಅಧಿಕೃತ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದು, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು.
ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಅವರು ಕೂಡ ಸಿಎಂ ಸ್ಥಾನಾಕಾಂಕ್ಷಿಯಾಗಿ ತಮ್ಮ ಬೇಡಿಕೆಯನ್ನು ಖರ್ಗೆ ಮುಂದಿಟ್ಟರು.
ಅಂತಿಮವಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಖರ್ಗೆ ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಬಹುಶಃ ನಾಳೆ ಬೆಂಗಳೂರಿನಲ್ಲಿ ನಿರ್ಣಯ ಪ್ರಕಟಗೊಳ್ಳುವ ಸಾಧ್ಯತೆ ಇದೆ.