ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗೆ ಇದೀಗ ಮುಖ್ಯಮಂತ್ರಿ ಆಯ್ಕೆ ಮಾಡುವುದೇ ದೊಡ್ಡ ತಲೆನೋವು ಆಗಿದ್ದು, ಭಾನುವಾರ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದರೂ ಒಮ್ಮತ ಸಿಗದ ಹಿನ್ನೆಲೆಯಲ್ಲಿ ಒಂದು ಲೈನ್ ನಿರ್ಣಯ ಕೈಗೊಂಡು ಹೈಕಮಾಂಡ್ಗೆ ಕಳುಹಿಸಲಾಗಿದೆ.
ಆದರೆ ಈಗ ಮತ್ತೊಮ್ಮೆ ನಾಳೆ ಬೆಳಗ್ಗೆ ಶಾಸಕಾಂಗದ ಸಭೆಯನ್ನು ನಡೆಸಿ ಎಲ್ಲ ಶಾಸಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಭೋಜನದ ಬಳಿಕ ವೈಯಕ್ತಿಕ ಅಭಿಪ್ರಾಯ ಸಂಗ್ರಹ ಮಾಡಲು ಕೇಂದ್ರ ನಾಯಕರು ಮುಂದಾಗಿದ್ದಾರೆ.
ಮೂರು ಜನ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ರಾತ್ರಿ ಎಷ್ಟೊತ್ತು ಆಗುತ್ತೋ ಅಷ್ಟೊತ್ತು ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಇನ್ನು ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹ ಆಗದಿದ್ದರೆ, ಉಳಿದವರನ್ನು ನಾಳೆ ಬೆಳಗೆಗೆಯೂ ಕರೆಸಿ ಅಭಿಪ್ರಾಯ ಕೇಳಲಾಗುತ್ತದೆ. ಇಂದು ರಾತ್ರಿಯೇ ಶಾಸಕರ ಅಭಿಪ್ರಾಯ ಪಡೆಯಲು ಪೂರ್ಣ ಪ್ರಯತ್ನ ಮಾಡಲಾಗುತ್ತದೆ. ಸಾಧ್ಯವಾಗದೇ ಇದ್ದರೆ ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ಬಾಕಿ ಇರುವ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಾಗುವುದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.