ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ.
ರಾಷ್ಟ್ರೀಯ ತನಿಖಾ ದಳ ಪ್ರಮುಖ ಆರೋಪಿಗಳಿಗೆ ಸೇರಿದ ಹಲವು ಸ್ಥಳಗಳ ಮೇಲೆ ಇಂದು ಮಂಜಾನೆ ದಾಳಿ ನಡೆಸಿದೆ.
ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಹರಿಯಾಣದಲ್ಲಿ ಆರೋಪಿಗಳಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡೀ ಬ್ರಾರ್ಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆದಿದ್ದು, ಶೋಧ ಜಾರಿಯಲ್ಲಿದೆ.
ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದ ಗಾಯಕ ಸಿಧು ಮೂಸೆವಾಲ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.