ಚುನಾವಣಾ ಕಣಕ್ಕೆ ಸಿದ್ದರಾಮಯ್ಯ ಗುಡ್‌ಬೈ: 2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ ಮಣಿಯದ ನಾಯಕ ಸಿದ್ದರಾಮಯ್ಯ ವೇದಿಕೆಯ ಮೇಲೆ ನಿವೃತ್ತಿಯ ಸುಳಿವು ನೀಡುತ್ತಿದ್ದಂತೆ ಕಾರ್ಯಕ್ರಮದಲ್ಲಿದ್ದ ನೂರಾರು ಅಭಿಮಾನಿಗಳು ಮತ್ತು ಬೆಂಬಲಿಗರು ಭಾವುಕರಾದರು. … Continue reading ಚುನಾವಣಾ ಕಣಕ್ಕೆ ಸಿದ್ದರಾಮಯ್ಯ ಗುಡ್‌ಬೈ: 2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮಾಜಿ ಸಿಎಂ