ಮೈಸೂರು ರೆಸಾರ್ಟ್ ​​ನಲ್ಲಿ ಸಿದ್ದು ವಾಸ್ತವ್ಯ: ಅಭ್ಯರ್ಥಿಗಳನ್ನ ಗೆಲ್ಲಿಸಲು ‘ಕೈ’ ರಣತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಲು ಪಣತೊಟ್ಟಿರುವ ಸಿಎಂ ಸಿದ್ದು ಮೂರು ದಿನಗಳ ಕಾಲ ಮೈಸೂರಿನ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ಸಿಎಂ. ರೆಸಾರ್ಟ್ ನಲ್ಲಿ ಕುಳಿತು ಆಪರೇಷನ್ ಹಸ್ತ ಆರಂಭಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ಆಪ್ತರಿಗೆ ಇದೀಗ ಸಿದ್ದು ಗಾಳ ಹಾಕಿದ್ದಾರೆ. ಯಡಿಯೂರಪ್ಪ ಆಪ್ತ ಎಚ್.ವಿ.ರಾಜೀವ್ ಬಳಿಕ ಸಿದ್ದರಾಮಯ್ಯ ಮತ್ತೊಬ್ಬ ಆಪ್ತ ಗೆಳೆಯನನ್ನು ಟಾರ್ಗೆಟ್ ಮಾಡಿದ್ದಾರೆ. ವರುಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸದಾನಂದರನ್ನು ಪಕ್ಷಕ್ಕೆ ಕರೆತರಲು ರಣತಂತ್ರ ರೂಪಿಸಿದ್ದಾರೆ.

ಈ ಹಿಂದೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಬೆಂಬಲಿಸಿದ್ದ ಸದಾನಂದ ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಿದ್ದರಾಮಯ್ಯ ಬಹುತೇಕ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ವೀರಶೈವ ಸಮುದಾಯದ ಮುಖಂಡರಲ್ಲಿ ಸದಾನಂದ ಕೂಡ ಒಬ್ಬರಾಗಿದ್ದು, ಸಿದ್ದರಾಮಯ್ಯ ಅವರೂ ತಮ್ಮ ನೇಮಕಾತಿ ಮೂಲಕ ವೀರಶೈವರ ಮತಗಳನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ತಂತ್ರಗಾರಿಕೆ ಶುರು ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!