ಯುದ್ದದ ಲಕ್ಷಣ…ನಾಲ್ಕು ಸುನಾಮಿಯ ಭೀತಿ: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಇಂದು ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ.

ರಾಜಕಾರಣ, ಪ್ರಕೃತಿ ವಿಕೋಪ , ದೇಶ ವಿದೇಶದ ಸಂಘರ್ಷಗಳು, ರೋಗ, ಯುದ್ಧಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಬಾಗಲಕೊಟೆಯಲ್ಲಿಂದು ಮಾತನಾಡಿರುವ ಕೋಡಿಮಠದ ಸ್ವಾಮೀಜಿ, ಪಹಲ್ಗಾಮ್ ಉಗ್ರರ ದಾಳಿ‌ ಬಗ್ಗೆ ಮಾತುಗಳನ್ನಾಡಿದ್ದು, ಯುದ್ದ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಪಹಲ್ಗಾಮ್‌ ದಾಳಿ‌ ಹಿನ್ನೆಲೆ ದೇಶದಲ್ಲಿ ಯುದ್ದ ಭೀತಿ ಇದೆ. ಯುದ್ದ ಅಲ್ಲಗಳೆಯುವಂತಿಲ್ಲ. ಮತೀಯ ಮತಾಂಧತೆ ಗೊಂದಲ ಬಹಳ ಹೆಚ್ಚಾಗುತ್ತದೆ. ಇನ್ನು ಜನಗಳಲ್ಲಿ‌ ಸಾವು ನೋವುಗಳು ಹೆಚ್ಚಾಗುತ್ತದೆ. ಕಂದಕ‌ ಉಂಟಾಗುತ್ತದೆ. ಅದು ಯಾರಿಗೂ ಶಾಂತಿ ಕೊಡುವಂತ ಪ್ರಸಂಗವಲ್ಲ,ಆದ್ದರಿಂದ ಯುದ್ದದ ಭೀತಿ‌‌ ಇದೆ ಎಂದಿದ್ದಾರೆ.

ಯುಗಾದಿ ಭವಿಷ್ಯದಲ್ಲಿ ನಾವು ಹೇಳಿದ್ದೆವು.ಉತ್ತರದ‌ ನಾಡಿನಲ್ಲಿ ಹಗೆಯ ಹೆಬ್ಬೇಗೆ ಹಬ್ಬೀತು, ಹುಟ್ಟೀತು ಸುತ್ತುವರೆದು ಬರುವಾಗ ಜಗವೆಲ್ಲ ಕೋಳಾದೀತು. ಸಾಮೂಹಿಕ ಹತ್ಯೆಯಾಗುತ್ತದೆ ಅಂತ. ಅದು ಹೇಳಿದ ಕೆಲ ದಿನಗಳಲ್ಲಿ ಕಾಶ್ಮೀರದಲ್ಲಿ ಹತ್ಯೆ ಆಯ್ತು. ಅದು ಜಗತ್ತಿನಾದ್ಯಂತ ಪ್ರಸಾರ ಆಗುತ್ತದೆ. ಆಗಲೇ ಶುರುವಾಗಿದೆ ಎಂದು ತಮ್ಮ ಭವಿಷ್ಯ ಸಮರ್ಥಿಸಿಕೊಂಡರು.

ಕುರಾನ್ ‌ನಲ್ಲಿ ಹೇಳ್ತಾರೆ ಸಣ್ಣ‌ ಕ್ರಿಮಿಯನ್ನು ಕೊಲ್ಲಬಾರದು ಅಂತ.ಕೊಂದರೆ ಸಾವಿರ ಜನರ‌ ಕೊಂದಷ್ಟು ಪಾಪ ‌ಬರುತ್ತೆ ಅಂತ.ಅಂತಹ ಮಾನವೀಯ ‌ಮೌಲ್ಯದ ದಯಾಪೂರ್ಣ ಮಾತು ಕುರಾನ್‌ನಲ್ಲಿದೆ.ಅಂತಹ ಅನುಯಾಯಿಗಳು ಹೀಗೆ ಮಾಡ್ತಾರೆ ಅಂದರೆ. ಅವರ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ‌ ಎಂದು ಹೇಳಿದರು.

ಜಗತ್ತಿನಾದ್ಯಂತ. ಜಲ ಸುನಾಮಿ, ವಾಯುಸುನಾಮಿ, ಭೂಸುನಾಮಿ,ಅಗ್ನಿಸುನಾಮಿ. ವಿಪರೀತ ಹೀಟಿನಿಂದ ಜನ ಬಾಳೋದೆ ಕಷ್ಟ. ಒಲೆ‌ ಹತ್ತಿ ಉರಿದರೆ ನಿಲ್ಲಬಹುದು. ಧರೆ ಹತ್ತಿದರೆ ಏನು ಮಾಡೋದು. ಸಮುದ್ರ ಉಕ್ಕುತ್ತದೆ. ಗಾಳಿಯಿಂದ ‌ಅನೇಕ ಸಾವು ನೋವಾಗುತ್ತದೆ ಎಂದರು.

ಅರಸನ ಅರಮನೆಗೆ ಕಾರ್ಮೋಣ ಕವಿದೀತು.ಮತ್ತೊಮ್ಮೆ ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದೆ. ಜಗತ್ತಿನಾದ್ಯಂತ ಈ ನಾಲ್ಕು ಸುನಾಮಿಗಳು ಎಲ್ಲವನ್ನೂ ಕಾಡುತ್ತವೆ. ನೀರು ಉಕ್ಕಿ ಬರುತ್ತದೆ ಬಿಸಿಲು ಉಕ್ಕಿ ಬರುತ್ತದೆ.ಗಾಳಿ ಉಕ್ಕಿ ಬರುತ್ತದೆ. ಬೆಂಕಿಯಿಂದ ಜನ ತತ್ತರಿಸಿ ಹೋಗ್ತಾರೆ.ಈ ವರ್ಷದಲ್ಲಿ ಒಂದು ರೋಗ ಬರುತ್ತದೆ.ಅದು ಐದು ವರ್ಷ ಇರುತ್ತದೆ. ಅದರಿಂದ ಸಾವುನೋವು ಇದೆ ಒಳ್ಳೆಯ ‌ಮಳೆ‌ ಬೆಳೆಯಾಗುತ್ತದೆ ಕರ್ನಾಟಕ ಸುತ್ತಮುತ್ತ. ಅಕಾಲದಲ್ಲಿ ಮಳೆ ಬಂದಿರೋದರಿಂದ.ಮುಂದೆ‌ ಸಕಾಲದಲ್ಲಿ ಬರುವ‌ ಮಳೆಗಳು ಬರಬಹುದು ಬರದೆ ಇರಬಹುದು.ಜನರಲ್ಲಿ‌ ಮತಾಂಧತೆ ಜಾತಿವಾಧ ಹೆಚ್ಚಾಗುತ್ತದೆ.ಸಾವು ನೋವು ಹೆಚ್ಚಾಗುತ್ತವೆ. ಭೂಕಂಪಗಳು ಹೆಚ್ಚಾಗುತ್ತವೆ. ಅಚ್ಚರಿಯ ದುಃಖದ ಪ್ರಸಂಗ ಭಾರತಕ್ಕೆ ಎದುರಾಗುತ್ತದೆ ಎಂದು ಎಚ್ಚರಿಕೆ ‌ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!