ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರಳ ಗಣರಾಜ್ಯೋತ್ಸವ : ಸಾರ್ವಜನಿಕರಿಗೆ ಪ್ರವೇಶ ಇಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಕೇಂದ್ರದ ನಿರ್ದೇಶನದಂತೆ ಈ ಬಾರಿ ರಾಜ್ಯದಲ್ಲಿ ಸರಳ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಾರ್ತಾ ಇಲಾಖೆ, ಮಿಲಿಟರಿ ಹಾಗೂ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.

ಈ ಬಾರಿ 200 ಮಂದಿಗಷ್ಟೇ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭಾಗಿಯಾಗುವ 200 ಮಂದಿಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಪರೇಡ್‌ನಲ್ಲಿ ಭಾಗಿಯಾಗುವವರೆಗೂ ಕೋವಿಡ್ ಪರೀಕ್ಷೆ ನಡೆಸಲಾಗುವುದು. ಕಾರ್ಯಕ್ರಮ ವೀಕ್ಷಣೆಗೆ ಬರುವ ಗಣ್ಯರು ಹಾಗೂ ಇತರ ಆಹ್ವಾನಿತರಿರು ಆಹ್ವಾನ ಪತ್ರಿಕೆ ಜತೆಗೆ ಅರ್ಹ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!