ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ.ಎಸ್. ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುರಿತು ಇದೀಗ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ರಾಘವೇಂದ್ರ, ಈಶ್ವರಪ್ಪ ಅವರ ಬಗ್ಗೆ ಮಾತನಾಡಲು ಇಷ್ಟವಿರಲಿಲ್ಲ. ಯಡಿಯೂರಪ್ಪನವರನ್ನು ಅನಾವಶ್ಯಕವಾಗಿ ದೂರುತ್ತಾರೆ. ಬಿಎಸ್ವೈ ಹಲವು ಸಮಸ್ಯೆಗಳಿಂದ ಮತ್ತು ಹೋರಾಟಗಳನ್ನು ನಡೆಸುತ್ತ ಬಂದವರು ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಪಾಪ… ಹದಿನೈದು ದಿನಗಳಿಂದ ಹೀಗೇ ಅನ್ನಿಸುತ್ತಿದೆ. ಅವರು ಹಿಂದೆಂದೂ ಈ ರೀತಿ ಏನನ್ನೂ ಅನುಭವಿಸಿರಲಿಲ್ಲ. ಪುತ್ರ ಕಾಂತೇಶ್ ಗೆ ಟಿಕೆಟ್ ಸಿಕ್ಕಿಲ್ಲ. ಆದ್ದರಿಂದ ನಮ್ಮ ಕುಟುಂಬವನ್ನು ಟೀಕಿಸುತ್ತಾರೆ.
ಕೆ.ಇ.ಕಾಂತೇಶ್ ಗೆ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರವಾಗಿತ್ತು. ಹೈಕಮಾಂಡ್ ನಿರ್ಧಾರವನ್ನು ಈಶ್ವರಪ್ಪ ಗೌರವಿಸಬೇಕಿತ್ತು ಎಂದು ಪ್ರತಿಕ್ರಿಯಿಸಿದರು.
ಈಶ್ವರಪ್ಪ ನಮ್ಮ ಕುಟುಂಬದವರನ್ನು ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಈಶ್ವರಪ್ಪ ಏನೇ ಹೇಳಿದರೂ ಅದು ಆಶಿರ್ವಾದ ಅಂದುಕೊಳ್ಳುತ್ತೇನೆ. ಜನರು ಮತದಾನದ ಮೂಲಕ ಉತ್ತರಿಸುತ್ತಾರೆ ಎಂದು ಹೇಳಿದರು.