ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಯಾವಾಗಿನಿಂದ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನ ನಿಗದಿಯಾಗಿದೆ. ಇದೇ ಏಪ್ರಿಲ್ 15 ರಿಂದ 23 ರವರೆಗೆ ಬೆಂಗಳೂರಿನಲ್ಲಿ ಕರಗ ಮಹೋತ್ಸವ ನಡೆಯಲಿದೆ.

ಕಡೆಯ ದಿನ ಏಪ್ರಿಲ್ 23ರಂದು ಚೈತ್ರ ಪೌರ್ಣಮಿಯಂದು ಕರಣ ಶಕ್ತ್ಯೋತ್ಸವ ನಡೆಯಲಿದೆ.

ಸತತ 14ನೇ ಬಾರಿ ಪೂಜಾರಿ ಎ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ದೇಗುಲದ ಆಡಳಿತ ಕರಗ ಉತ್ಸವ ದಿನಾಂಕ ಘೋಷಣೆ ಮಾಡಿದೆ.

ಕಳೆದ ವರ್ಷ ಜ್ಞಾನೇಂದ್ರ ಅವರು ಕರಗ ಹೊತ್ತಾ ಕೆಲ ಕಿಡಿಗೇಡಿಗಳು ಅವರ ಮೇಲೆ ಕೆಮಿಕಲ್ ಎರಚಿದ್ದರು. ಆದರೂ ಜ್ಞಾನೇಂದ್ರ ಅವರು ಉತ್ಸವ ಸಂಪೂರ್ಣ ಯಶಸ್ವಿಯಾಗಿ ನೆರವೇರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!