ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀವು ನಮಗೆ ಬರಬೇಕಾದ ನೀರನ್ನು ನಿರ್ಬಂಧಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸ್ತೇವೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಅಹ್ಮದ್ ಷರೀಫ್ ಪುನರುಚ್ಚರಿಸಿದ್ದಾನೆ.
ಭಾರತ ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸ್ತೇವೆ ಎಂದು ಹೇಳಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು.
ಭಾರತದ ಈ ಕ್ರಮವನ್ನು ಉಲ್ಲೇಖಿಸಿ, 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಸಹ ಇದೇ ಹೇಳಿಕೆ ನೀಡಿದ್ದ. ಇದೀಗ ಪಾಕ್ ಸೇನಾ ವಕ್ತಾರ ಸಹ ಅದನ್ನೇ ಪುನರುಚ್ಚರಿಸಿದ್ದಾನೆ. ಪಾಕ್ ಸೇನಾ ವಕ್ತಾರ ಕಾರ್ಯಕ್ರಮದಲ್ಲಿ ಮಾತಾಡುತ್ತಿರುವ ವೀಡಿಯೋ ಎಕ್ಸ್ನಲ್ಲಿ ವೈರಲ್ ಆಗಿದೆ.