ಹೊಸದಿಗಂತ ವರದಿ ಬಾಗಲಕೋಟೆ:
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಶ್ರೀರಾಮ ಕೃಷ್ಣ ಪರಮಹಂಸರ ಶಿಕ್ಷಣ ಸಂಸ್ಥೆಯ ಸಿರಿಗನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಲಿಂಗೈಕ್ಯರಾದ ಶ್ರೀ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬೆಳಗ್ಗೆ ಶಾಲಾ ಪ್ರಾರ್ಥನೆ ಮುಗಿದ ಬಳಿಕ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಮಕ್ಕಳು ಮೌನಾಚಾರಣೆ ಮಾಡಿದರು.
ನಂತರ ಮುಖ್ಯ ಶಿಕ್ಷಕಿ ಸುಷ್ಮಾ ಸಿಂಗರೆಡ್ಡಿಯವರು ಶಾಲಾ ಮಕ್ಕಳಿಗೆ ಸಿದ್ದೇಶ್ವರ ಶ್ರೀಗಳ ಕುರಿತು ತಿಳಿಸಿದರು.