ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು ನಡೆಸುತ್ತಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಈ ಹತ್ಯೆಯ ಸಂಚು ರೂಪಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
गुजरात व MCD चुनाव मे हार के डर से बौखलाई BJP @ArvindKejriwal की हत्या की साजिश रच रही है
इनके सांसद मनोज तिवारी खुलेआम अपने गुंडो को अरविंद जी पर हमला करने के लिए कह रहे है और इसकी पूरी प्लानिंग कर ली है
AAP इनकी टुच्ची राजनीति से नही डरती,इनके गुंडागर्दी का जबाव अब जनता देगी
— Manish Sisodia (@msisodia) November 24, 2022
ಗುರುವಾರ ರಾತ್ರಿ ಟ್ವಿಟರ್ನಲ್ಲಿ ಮನೀಶ್ ಸಿಸೋಡಿಯಾ ಇಂತಹ ಆರೋಪ ಮಾಡಿದ್ದು, ಬಿಜೆಪಿ ಸಂಸದ ಮನೋಜ್ ತಿವಾರಿ ತಮ್ಮ ಗೂಂಡಾಗಳನ್ನು ಕೇಜ್ರಿವಾಲ್ ಮೇಲೆ ದಾಳಿ ಮಾಡಲು ಪ್ರಚೋದಿಸುತ್ತಿದ್ದಾರೆ. ಬಿಜೆಪಿಯ ಇಂತಹ ಕೃತ್ಯಗಳಿಗೆ ಎಎಪಿ ಹೆದರುವುದಿಲ್ಲ ಎಂದು ಮನೀಶ್ ಬರೆದುಕೊಂಡಿದ್ದಾರೆ. ಮನೀಷ್ ಆರೋಪಗಳು ಗಂಭೀರವಾಗಿರುವುದರಿಂದ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತಕ್ಷಣ ಸ್ಪಂದಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದರು.
ದೆಹಲಿ ಮುನ್ಸಿಪಲ್ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಮಾರಾಟದ ಆರೋಪದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಭದ್ರತೆಯ ಬಗ್ಗೆ ಮನೋಜ್ ತಿವಾರಿ ಕಳವಳ ವ್ಯಕ್ತಪಡಿಸಿದ್ದರು. ತಿವಾರಿ ಅವರ ಈ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಸಿಸೋಡಿಯಾ ಇಂತಹ ಗಂಭೀರ ಆರೋಪ ಮಾಡಿದ್ದಾರೆ.