ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ.

ಸಿಸೋಡಿಯಾ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ‌ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಆರೋಪದ ಎರಡೂ ಪ್ರಕರಣಗಳಲ್ಲಿ ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಹಾಗೂ ತನಿಖಾ ಸಂಸ್ಥೆಗಳ ಪರ ವಕೀಲರ ವಾದವನ್ನು ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದರು.

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಆರೋಪದಡಿ ಸಿಸೋಡಿಯಾ ಅವರನ್ನು ಕಳೆದ ವರ್ಷ ಫೆ.26ರಂದು ಸಿಬಿಐ ಬಂಧಿಸಿತ್ತು. ಇದೇ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಮಾ.9 ರಂದು ಇ.ಡಿ ಅವರನ್ನು ಬಂಧಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!