SHOCKING | ತೋಟದಲ್ಲಿ ಕೆಲಸ ಮಾಡುವಾಗ ಕೃಷಿಹೊಂಡದಲ್ಲಿ ಮುಳುಗಿ ಅಕ್ಕ, ತಂಗಿಯ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೃಷಿಹೊಂಡದಲ್ಲಿ ಕಾಲು ಜಾರಿ‌ಬಿದ್ದು ಅಕ್ಕ ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಧಾ(17), ಸಾಹಿತಿ(14) ಮೃತ ದುರ್ದೈವಿಗಳು. ಬೇಸಿಗೆ ರಜೆ ಇದ್ದ ಕಾರಣ ತಾಯಿಯ ಜೊತೆ ತೋಟದಲ್ಲಿ ಕೆಲಸ ಮಾಡುವಾಗ ಕೃಷಿ ಹೊಂಡಕ್ಕೆ ಆಳವಡಿಸಿದ್ದ ಪೈಪ್‌ ಸರಿ ಮಾಡಲು ಹೋಗಿ ಅಕ್ಕ ತಂಗಿ ಇಬ್ಬರು ಕಾಲು ಜಾರಿ ಬಿದ್ದಿದ್ದಾರೆ.

ತಂದೆ ಇಲ್ಲದೇ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಈಗ ಮುಗಿಲುಮುಟ್ಟಿದೆ. ಚೇಳೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!