ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹೋದರಿಯರಿಬ್ಬರು ಕಾಲು ಜಾರಿ ನದಿಯಲ್ಲಿ ಬಿದ್ದು. ಅಕ್ಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ, ತಂಗಿ ಪಾರಾದ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಪಾಸಲ್ಬಂಡಾ ಕ್ಯಾಂಪ್ನಲ್ಲಿ ನಡೆದಿದೆ.
ಲಕ್ಷ್ಮಿ (19 ವರ್ಷ) ಮೃತ ದುರ್ದೈವಿ. ಕವಿತಾಳನ್ನು (17) ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ, ಆಕೆ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಲಕ್ಷ್ಮಿ ಮಾನ್ವಿ ಪಟ್ಟಣದ ವೆಂಕಟೇಶ್ವರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಮಧ್ಯಾಹ್ನ ಅವಳು ತನ್ನ ಸಹೋದರಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದಾರೆ. ಮನೆಗೆ ಹೋಗುವ ಮುನ್ನ ಕುರಿಗಳಿಗೆ ನೀರು ಹಾಕಲು ಕೆರೆಗೆ ಬಂಡಿದ್ದಾರೆ. ಈ ವೇಳೆ ಅಕ್ಕ, ತಂಗಿ ಇಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಈಜು ಬಾರದ ಕಾರಣ ಲಕ್ಷ್ಮಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ. ಅಲ್ಲಿದ್ದ ಸ್ಥಳೀಯರು ಕವಿತಾಳನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.