ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಗೃಹ ಸಚಿವ ಜಿ ಪರಮೇಶ್ವರ್ ಮತ್ತೊಮ್ಮೆ ತಕ್ಕ ಉತ್ತರ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಬಗ್ಗೆ ಯಾವಾಗಲೂ ಮಾತನಾಡುವ ಅವರಿಗೆ ಪ್ರಕರಣದ ತನಿಖೆ ವೇಳೆ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ, ಕುಮಾರಸ್ವಾಮಿಗೂ ಗೊತ್ತು, ಮಂಡ್ಯ ಶಾಸಕರಿಗೆ ಯಾರೂ ಮಾಹಿತಿ ನೀಡಿಲ್ಲ, ಒಂದು ಸರ್ಕಾರದ ಭಾಗವಾಗಿ ನಮಗೆ ಜವಾಬ್ದಾರಿಗಳಿವೆ, ಎಸ್ಐಟಿ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಇಂತಹ ಪ್ರಕರಣಗಳನ್ನು ಲಘುವಾಗಿ ಪರಿಗಣಿಸುವ ಪ್ರಶ್ನೆಯೇ ಇಲ್ಲ, ವಿರೋಧ ಪಕ್ಷದ ನಾಯಕರು ಇಂತಹ ಆರೋಪ ಮಾಡುತ್ತಾರೆ, ಅದು ಅವರ ಕೆಲಸ, ಆದರೆ ನಾವು ನಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿದ್ದೇವೆ, ಅಗತ್ಯವಿದ್ದಾಗ ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿ ಅಥವಾ ನನಗೆ ಮಾಹಿತಿ ತಿಳಿಸುತ್ತಾರೆ ಎಂದು ಪರಮೇಶ್ವರ್ ಹೇಳಿದರು.