ಬೆಂಗಳೂರಿನಲ್ಲಿ ಕಟ್ಟಡ ಕುಸಿತಕ್ಕೆ ಆರು ಬಲಿ: ಮಾಲೀಕ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು  ಇಬ್ಬರನ್ನು ಬಂಧಿಸಿದ್ದಾರೆ.

ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದನು. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಎನ್​ಡಿಆರ್​ಎಫ್​,  ಎಸ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!