ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಂದೇಡ್ನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ನಿನ್ನೆ ರಾತ್ರಿ ಆರು ಮಂದಿ ಮೃತಪಟ್ಟಿದ್ದಾರೆ.
ಇಬ್ಬರು ಪ್ರೀಮೆಚ್ಯೂರ್ ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಒಟ್ಟಾರೆ 48 ಗಂಟೆಯಲ್ಲಿ35 ರೋಗಿಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಳಚೆ ಪ್ರದೇಶದಲ್ಲಿ ಆಸ್ಪತ್ರೆಯ ರೋಗಿಗಳು ಮುಖ ತೊಳೆಯುವುದು, ಹಲ್ಲು ಉಜ್ಜುವುದನ್ನು ಮಾಡುತ್ತಾರೆ. ಇದೇ ಜಾಗದಲ್ಲಿ ಹಂದಿಗಳು ಕೂಡ ಓಡಾಡುತ್ತವೆ. ನೈರ್ಮಲ್ಯತೆಯ ಕೊರತೆಯೇ ರೋಗಿಗಳ ಸಾವಿಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಸಿಎಂ ಏಕನಾಥ್ ಶಿಂಧೆ ಮಾತನಾಡಿದ್ದು, ಸರ್ಕಾರ ಈ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.