ಹೊಸದಿಗಂತ ವರದಿ ಮಡಿಕೇರಿ:
ಆರನೇ ತರಗತಿಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಶಾಲನಗರ ಸಮೀಪದ ಕೂಡುಮಂಗಳೂರಿನಿಂದ ವರದಿಯಾಗಿದೆ.
ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ ಅವರ ಪುತ್ರ, ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿ ಕೀರ್ತನ್ (12) ಮೃತಪಟ್ಟ ಬಾಲಕ.
ಶನಿವಾರ ತಡರಾತ್ರಿ ಮಲಗಿದ್ದ ಜಾಗದಿಂದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು ಪೋಷಕರು ಕುಶಾಲನಗರ ಆಸ್ಪತ್ರೆ ಕರೆದೊಯ್ಯುವ ವೇಳೆಗೆ ಬಾಲಕ ಮೃತಪಟ್ಟಿದ್ದಾನೆ. ಈತ ಓದುತ್ತಿದ್ದ ಶಾಲೆಯಲ್ಲೇ ಬಾಲಕನ ತಂದೆ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಹೇಳಲಾಗಿದೆ.