ಆಪರೇಷನ್‌ ಅಜಯ್‌ ಕಾರ್ಯಾಚರಣೆ: ತಾಯ್ನಾಡಿಗೆ ಮರಳಿದ 143 ಭಾರತೀಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಸ್ರೇಲ್ ಮತ್ತು ಹಮಾಸ್​ ಉಗ್ರರ ನಡುವಿನ ಸಂಘರ್ಷ ಮುಂದುವರೆದಿದ್ದು, ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ‘ಆಪರೇಷನ್ ಅಜಯ್’ ಅಡಿಯಲ್ಲಿ ಭಾರತಕ್ಕೆ ಕರೆತರುವ ಕಾರ್ಯ ನಡೆಯುತ್ತಿದ್ದು, ಇಬ್ಬರು ನೇಪಾಳಿ ನಾಗರಿಕರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 143 ಜನರನ್ನು ಹೊತ್ತ ವಿಶೇಷ ವಿಮಾನವು ಇಸ್ರೇಲ್‌ನಿಂದ ಹೊರಟು ಭಾರತಕ್ಕೆ ತಲುಪಿದೆ.

ಭಾನುವಾರ ರಾತ್ರಿ ಭಾರತೀಯರನ್ನು ಹೊತ್ತ ಆರನೇ ವಿಮಾನವು ಇಸ್ರೇಲ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ದೆಹಲಿಗೆ ಆಗಮಿಸಿದ 143 ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಫಗ್ಗಾನ್​ ಸಿಂಗ್​ ಕುಲಾಸ್ತೆ ಸ್ವಾಗತಿಸಿದರು.

‘ಆಪರೇಷನ್‌ ಅಜಯ್’ ಕಾರ್ಯಾಚರಣೆ ಅಡಿಯಲ್ಲಿ ಭಾರತೀಯರನ್ನು ಹೊತ್ತ ಆರನೇ ವಿಮಾನ ದೆಹಲಿಗೆ ಬಂದಿಳಿದಿದೆ. ವಿಮಾನದಲ್ಲಿ ಇಬ್ಬರು ನೇಪಾಳದ ಪ್ರಜೆಗಳು ಸೇರಿದಂತೆ 143 ಮಂದಿ ಪ್ರಯಾಣಿಕರು ಬಂದಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ಆಪರೇಷನ್​ ಅಜಯ್​ ಕಾರ್ಯಾಚರಣೆ ನಡೆಸುತ್ತಿದೆ. ಆಪರೇಷನ್​ ಅಜಯ್​ ಅಡಿಯಲ್ಲಿ ಈವರೆಗೆ 1200 ಭಾರತೀಯರನ್ನು ಮತ್ತು 20 ನೇಪಾಳದ ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!