ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬ್ರೇಕ್, ಎಲ್ಲೆಲ್ಲಿ ಬಂದ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಗಸ್ಟ್ 26 ರ ಸೋಮವಾರದಂದು (ನಾಳೆ) ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ವಧೆ ಮಾಡುವುದು ಹಾಗೂ ಅಂಗಡಿಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ನಾಳೆ ನಿಲ್ಲಿಸುವಂತೆ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿಯ ದಿನದಂದು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ದಿನ ಹಸಿ ಮಾಂಸ, ಮೀನು ಮಾರಾಟ ಮಾಡುವಂತಿಲ್ಲ. ನಗರದ ಮಾಂಸ, ಕೋಳಿ ಮತ್ತು ಮೀನು ಅಂಗಡಿಗಳಲ್ಲಿ ಮಾರಾಟಕ್ಕೆ ಅವಕಾಶ ನೀಡದಂತೆ ಬಲವಾಗಿ ಶಿಫಾರಸು ಮಾಡಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಯಾದವರು ಅಂದರೆ ಗೊಲ್ಲರು ಮಾಸ ತಿನ್ನುತ್ತಾರೆ ಅದಕ್ಕೆ ಯಾಕೆ ಮಾಂಸ ಮಾರಾಟ ನಿಷೇಧ ಮಾಡುವುದು

LEAVE A REPLY

Please enter your comment!
Please enter your name here

error: Content is protected !!