ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ‘ಇನ್ವೆಸ್ಟ್ ಕರ್ನಾಟಕ 2022 (Invest Karnataka 2022)’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪೀಯುಷ್ ಗೋಯೆಲ್ ಕನ್ನಡದಲ್ಲಿಯೇ ನಮಸ್ಕಾರ ಹೇಳಿ ಭಾಷಣವನ್ನು ಆರಂಭ ಮಾಡಿದ್ದಾರೆ.
ಈ ವೇಳೆ ಅವರು, ಕಾಂತಾರ ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದರು.
ಹೂಡಿಕೆಯನ್ನು ಕಾಂತಾರ ಸಿನಿಮಾಗೆ ಹೋಲಿಕೆ ಮಾಡಿದ ಸಚಿವರು, ನಾನು ಆ ಸಿನಿಮಾ ನೋಡಿದ್ದೇನೆ. ಬಹಳ ಚಿಕ್ಕ ಬಜೆಟ್ ಸಿನಿಮಾ ಇದು. ಇದರಲ್ಲಿ ಕರ್ನಾಟಕ ಸಂಸ್ಕೃತಿಯನ್ನು ಎಷ್ಟು ಚಂದವಾಗಿ ತೋರಿಸಿದ್ದಾರೆ. ನಾನು ಈ ಸಿನಿಮಾದ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿದೆ. ಎರಡಂಕಿ ಬಜೆಟ್ ಇಂದು 300 ಕೋಟಿಗೂ ಹೆಚ್ಚು ಅದಾಯ ಗಳಿಸಿದೆ. ಹೂಡಿಕೆ ಸಹ ಸಣ್ಣಾದಾಗಿ ಮಾಡಿದ್ದರೂ, ದೊಡ್ಡ ಮಟ್ಟದಲ್ಲಿ ಆದಾಯ ಪಡೆಯುವಲ್ಲಿ ಶ್ರಮ ಮಾಡಬಹುದು ಎಂದು ಸಮಾವೇಶದಲ್ಲಿ ಗೋಯೆಲ್ ಮಾತನಾಡಿದ್ದಾರೆ.