ಸ್ಮಾರ್ಟ್‌ ಸಿಟಿ ಬೆಂಗಳೂರು: ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಿಲಿಕಾನ್‌ ಸಿಟಿ ಬೆಂಗಳೂರನ್ನು ಸ್ಮಾರ್ಟ್‌ ಸಿಟಿ ಮಾಡುವ ಕಾಮಗಾರಿಯನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಪರಿಶೀಲಿಸಿದ್ದಾರೆ.
ಇಂದು ಬೆಳಗ್ಗೆ ಬಸವೇಶ್ವರ ವೃತ್ತದ ಮೂಲಕ ಮಿನ್‌ ಸ್ಕ್ವೇರ್‌ ಸಂಪರ್ಕಿಸುವ ರಾಜಭವನ ರಸ್ತೆ ಹಾಗೂ ಚಾಲುಕ್ಯ ಸರ್ಕಲ್‌ ನಿಂದ ಆಲಿ ಆಸ್ಕರ್, ಕನ್ನಿಂಗ್ ಹ್ಯಾಮ್ ರಸ್ತೆಗಳ ಮೂಲಕ ಕಂಟೋನ್ ಮೆಂಟ್ ಸಂಪರ್ಕಿಸುವ ಮಿಲ್ಲರ್ಸ್ ರಸ್ತೆಗಳ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದಾರೆ.
ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ ರಾಕೇಶ್ ಸಿಂಗ್, ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಹೆಚ್ಚುವರಿ ಕೆಲಸಗಾರರನ್ನು ನಿಯೋಜಿಸಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!