ಸ್ಮಾರ್ಟ್ ಫುಟ್ ಪಾತ್ ಅಗೆದು ವಿರೂಪ: ಆಕ್ರೋಶ

ಹೊಸ ದಿಗಂತ ವರದಿ, ಶಿವಮೊಗ್ಗ:

ಸ್ಮಾರ್ಟ್ ಸಿಟಿ ಯೋಜನೆ ಅಡಿ ಅಭಿವೃದ್ಧಿ ಪಡಿಸಲಾಗಿರುವ ಪಾದಚಾರಿ ಮಾರ್ಗವನ್ನು ಅಗೆದು ವಿರೂಪಗೊಳಿಸಿರುವ ಘಟನೆ ನಡೆದಿದೆ.
ನಗರದ ಉಷಾ ನರ್ಸಿಂಗ್ ಹೋಂ ಬಳಿಯಿಂದ ರೈಲ್ವೆ ನಿಲ್ದಾಣದ ಕಡೆ ಸಾಗುವ 100 ಅಡಿ ರಸ್ತೆಯಲ್ಲಿ ಈ ರೀತಿ ಅಗೆದು ಹಾಳು ಮಾಡಲಾಗಿದೆ.

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಅವರ ನಿವಾಸಕ್ಕಿಂತ ಸ್ವಲ್ಪ ಮುಂದೆ ಹೀಗೆ ಮಾಡಿದ್ದಾರೆ.
ಕಳೆದ ಆರು ತಿಂಗಳಿನಿಂದ 100 ಅಡಿ ರಸ್ತೆಯನ್ನು ಸ್ಮಾರ್ಟ್ ಸಿಟಿ ಯೋಜನೆ ಅಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇತ್ತೀಚೆಗೆ ಪಾದಚಾರಿ ಮಾರ್ಗದಲ್ಲಿ ಟೈಲ್ಸ್ ಹಾಕಿ ಕಾಮಗಾರಿ ಮಾಡಲಾಗಿತ್ತು. ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ಟೈಲ್ಸ್‌ಗಳನ್ನು ಕಿತ್ತು ಪಾದಚಾರಿ ಮಾರ್ಗದಲ್ಲಿ ಕಂಬಗಳನ್ನು ನೆಡಲಾಗಿದೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಈ ರೀತಿ ಟೈಲ್ಸ್‌ಗಳನ್ನು ಕಿತ್ತು ಕಂಬಗಳನ್ನು ನೆಡಲು ಅನುಮತಿ ನೀಡಿದವರು ಯಾರು ಎಂದು ನಾಗರೀಕರು ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!