ಸ್ಮೋಕ್ ಬಾಂಬ್: ಮನೋರಂಜನ್ ಡೈರಿಯಲ್ಲಿ ಹೆಸರು ಬರೆದಿದ್ದ ಬಾಗಲಕೋಟೆಯ ಟೆಕ್ಕಿ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಟೆಕ್ಕಿಯೊಬ್ಬರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆಯ ನಿವೃತ್ತ ಡಿವೈಎಸ್‌ಪಿ ಪುತ್ರ ಸಾಯಿಕೃಷ್ಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಈತ ಮನೋರಂಜನ್ ಸ್ನೇಹಿತ. ಇವರಿಬ್ಬರೂ ಬೆಂಗಳೂರಿನಲ್ಲಿ ಬಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಕಾಲೇಜು ಹಾಸ್ಟೆಲ್‌ನಲ್ಲಿ ಇಬ್ಬರೂ ರೂಮ್‌ಮೇಟ್ಸ್ ಆಗಿದ್ದರು.

ಮನೋರಂಜನ್ ಡೈರಿಯಲ್ಲಿ ಸಾಯಿಕೃಷ್ಣ ಹೆಸರಿದೆ. ಈ ಕಾರಣದಿಂದ ಪೊಲೀಸರು ಸಾಯಿಕೃಷ್ಣರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!