ಸ್ಮೋಕ್ ಬಾಂಬ್ ಘಟನೆ: ಮೊದಲ ಬಾರಿ ಮಾಧ್ಯಮ ಜೊತೆ ಮಾತನಾಡಿದ ಸಂಸದ ಸಿಂಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನೇ ಬೆಚ್ಚಿಬೀಳಿಸಿದ್ದ ಸಂಸತ್ ಸ್ಮೋಕ್ ಬಾಂಬ್ ಘಟನೆಯ ಬಳಿಕ ಮೊದಲ ಬಾರಿಗೆ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ದೇಶದ್ರೋಹಿನಾ ದೇಶಪ್ರೇಮಿನಾ ಅಂತಾ ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ, ನನ್ನ ಓದುಗರು, ಮೈಸೂರು ಕೊಡಗಿನ ಜನ ತೀರ್ಪು ನೀಡುತ್ತಾರೆ. ಈ ವಿಚಾರದಲ್ಲಿ ನಾನು ಇಷ್ಟೇ ಹೇಳುತ್ತೇನೆ. ಈ ಬಗ್ಗೆ ಬೇರೆ ಏನೂ ಕೇಳಬೇಡಿ ಎಂದರು. ಹೆಚ್ಚಿನ ಪ್ರತಿಕ್ರಿಯೆ ನೀಡುವಂತೆ ಪತ್ರಕರ್ತರು ಒತ್ತಾಯಿಸಿದ್ದಕ್ಕೆ ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ. ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ ಎಂದು ಸಿಂಹ ಉತ್ತರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!