ಹೊಸದಿಗಂತ ವರದಿ ಕೊಪ್ಪಳ:
ಕಾನೂನಿನ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಪ್ರಯೋಜನವಿಲ್ಲ ಎನಿಸುತ್ತಿದೆ. ಕುಷ್ಟಗಿಯಲ್ಲಿ ದಲಿತರ ಮೇಲೆ ನಿರಂತರವಾಗಿ ಶೋಷಣೆ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ತಾಲ್ಲೂಕಿನ ಕಲ್ಲಗೋನಾಳದಲ್ಲಿ ಪರಿಶಿಷ್ಟ ಕುಟುಂಬವೊಂದಕ್ಕೆ ಕೆಲ ದಿನಗಳ ಹಿಂದೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಶರಣಪ್ಪ ಮಾದರ ಎಂಬುವವರ ದೂರಿನ ಅನ್ವಯ ಹನುಮಸಾಗರ ಪೊಲೀಸ್ ಠಾಣೆಯಲ್ಲಿ 20 ಜನರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.