ಶ್ರೀ ಸಾನ್ನಿಧ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ಸಂಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯಕಂಚಿನ ಪ್ರಗತಿಯ ಪ್ರತಿಮೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಪವಿತ್ರ ಮೃತ್ತಿಕೆ ಸಂಗ್ರಹ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು, ಅಭಿಯಾನ ಚಾಲನೆಯ ಸಾನ್ನಿಧ್ಯವನ್ನು ಮಂಗಳೂರು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು.

ರಥದ ಚಾಲನೆಯನ್ನು ಇಂಧನ ಹಾಗೂ ಕನ್ನಡ-ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ , ದ.ಕ ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ , ಸಂಜೀವ ಮಠಂದೂರು, ಪ್ರತಾಪ್ ಸಿಂಹನಾಯಕ್, ಮೆಯರ್ ಜಯಾನಂದ ಅಂಚನ್ ಹಾಗೂ ನಗರಪಾಲಿಕೆ ಸದಸ್ಯರು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!