ಕಾಮಗಾರಿ ಹೆಸರಲ್ಲಿ ಫಲ್ಗುಣಿ ಒಡಲಿಗೆ ಮಣ್ಣು: ಎನ್ ಇಸಿಎಫ್ ಕಳವಳ, ತಕ್ಷಣ ತೆರವಿಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಸುಲ್ತಾನ್ ಬತ್ತೇರಿ-ತಣ್ಣೀರ್‌ಬಾವಿ ಸಂಪರ್ಕಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಗೆ ಅನುಕೂಲವಾಗುವಂತೆ ಫಲ್ಗುಣಿ ನದಿಗೆ ಅಡ್ಡಲಾಗಿ ಹಾಕಿರುವ ಮಣ್ಣನ್ನು ಮಳೆಗಾಲದ ಮೊದಲು ತೆಗೆಯಯದಿದ್ದರೆ ಹಲವು ಪ್ರದೇಶಗಳು ಮುಳುಗಡೆಯಾಗಲಿದೆ. ಆದ್ದರಿಂದ ಆದಷ್ಟು ಶೀಘ್ರ ಮಣ್ಣನ್ನು ತೆರವುಗೊಳಿಸಬೇಕು ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ (ಎನ್‌ಇಸಿಎಫ್)ಸದಸ್ಯರು ಆಗ್ರಹಿಸಿದ್ದಾರೆ. ಗುರುವಾರ ಸ್ಥಳಕ್ಕೆ ಭೇಟಿ ನೀಡಿದ ಎನ್‌ಇಸಿಎಫ್ ಸದಸ್ಯರು, ಸೇತುವೆ ನಿರ್ಮಾಣದ ಉದ್ದೇಶದಿಂದ ಹಾಕಿರುವ ಮಣ್ಣನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಎನ್‌ಇಸಿಎಫ್ ಪ್ರಧಾನ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಮಾತನಾಡಿ, ಸೇತುವೆ … Continue reading ಕಾಮಗಾರಿ ಹೆಸರಲ್ಲಿ ಫಲ್ಗುಣಿ ಒಡಲಿಗೆ ಮಣ್ಣು: ಎನ್ ಇಸಿಎಫ್ ಕಳವಳ, ತಕ್ಷಣ ತೆರವಿಗೆ ಆಗ್ರಹ