ಹೊಸದಿಗಂತ ವರದಿ,ಮಡಿಕೇರಿ:
ರಜೆಯಲ್ಲಿ ಬಂದಿದ್ದ ಯೋಧರೊಬ್ಬರು ಕಾರು ಅವಘಡದಲ್ಲಿ ಸಾವಿಗೀಡಾದ ಘಟನೆ ಸೋಮವಾರ ನಡೆದಿದೆ.
ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ(36) ಎಂಬವರೇ ಸಾವಿಗೀಡಾದ ಯೋಧ.
ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿದ್ದಾಗ, ಗೋಣಿಕೊಪ್ಪ ಸಮೀಪದ ಚೆನ್ನಂಗೊಲ್ಲಿ ಬಳಿ ಅವರ ಕಾರು ಮರಕ್ಕೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಗೋಣಿಕೊಪ್ಪ ಸರಕಾರಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ಹೇಳಲಾಗಿದೆ.