ಹೊಸದಿಗಂತ ವರದಿ ಮೈಸೂರು:
ಮೈಸೂರಿನ ಕೆಲ ಘಟಾನುಘಟಿ ರಾಜಕೀಯ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟಾನುಘಟಿ ನಾಯಕರು ಈಗಾಗಲೇ ಬಿಜೆಪಿ ನಾಯಕರನ್ನು ಸಂಪರ್ಕಿಸಿ, ಪಕ್ಷದ ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದ್ದಾರೆ. ಕೊನೇ ಹಂತದ ಚರ್ಚೆ ನಡೆದಿದೆ. ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷದವರು ಬಿಜೆಪಿಗೆ ಬರ್ತಾರೆ. ಯಾವುದೇ ಕಂಡಿಷನ್ಗಳಿಲ್ಲದೆ ಬಿಜೆಪಿಗೆ ಬರಲು ಒಪ್ಪಿಕೊಂಡಿದ್ದಾರೆ. ಅವರು ಯಾರು ಅಂತ ಈಗಲೇ ಏನೂ ಹೇಳಲ್ಲ ಕೊನೆಯ ಹಂತದ ಮಾತುಕತೆ ಮುಗಿಯಲಿ ಎಲ್ಲವನ್ನೂ ಸ್ಪಷ್ಟಪಡಿಸುತ್ತೇವೆ ಎಂದು ಹೇಳಿದರು.