ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ ಎಂದು ಸತೀಶ್ ಜಾರಕಿಹೊಳಿ ಹೊಸ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡೆಸಿಯೇ ಇಲ್ಲ. ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ, ಅಲ್ಲೇ ಇದ್ದೇನೆ. ನಮ್ಮನ್ನು ಪುಶ್ ಮಾಡೋರು ಇಲ್ವಲ್ಲ. ಬಿಜೆಪಿ ರಾಜ್ಯಾದ್ಯಕ್ಷ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಾ ಅನ್ನೋ ಪ್ರಶ್ನೆಗೆ, ಬಿಜೆಪಿ ಫಾರ್ಮುಲಾ ಬೇರೆ, ನಮ್ಮದು ಬೇರೆ. ಅವರ ಐಡಿಯಾಲಜಿ ಬೇರೆ, ನಮ್ಮದು ಬೇರೆ. ಬಿಜೆಪಿಗೂ ನಮ್ಮ ಆಯ್ಕೆಗೂ ಸಂಬಂಧವಿಲ್ಲ ಎಂದು ತಿಳಿಸಿದರು.