ಅಪ್ಪನನ್ನು ಆಸ್ಪತ್ರೆಗೆ ಸೇರಿಸಿ ಕಾರ್‌ನಲ್ಲೇ ಮಲಗಿದ್ದ ಮಗ ಸಾವು, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವ್ಯಕ್ತಿಯೊಬ್ಬರು ತನ್ನ ತಂದೆಯನ್ನು ಆಸ್ಪತ್ರೆಯಲ್ಲಿ ದಾಖಲಿಸಿ ರಾತ್ರಿ ಕಾರ್‌ನಲ್ಲಿಯೇ ಮಲಗಿದ್ದು, ಬೆಳಗಾಗುವ ಹೊತ್ತಿಗೆ ಪ್ರಾಣಬಿಟ್ಟಿದ್ದಾರೆ. ಇದಕ್ಕೆಲ್ಲಾ ಎಸಿ ಕಾರಣವಾಗಿದೆ.

 ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಪ್ರಾಣವೇ ಹೋಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ 32 ವರ್ಷದ ಗುರುರಾಜ್ ಮೃತ ವ್ಯಕ್ತಿ.

ಗುರುರಾಜ್‌ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದರು.

ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!