ಕುಡಿಯಲು ಹಣ ಕೊಡದಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಗನೇ ತಂದೆಯ ಕೊಲೆ ಮಾಡಿದ ಭೀಕರ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೇನಹಳ್ಳಿ ಪಿಎಸ್ ಲೇಔಟ್​ನಲ್ಲಿ ನಡೆದಿದೆ.

ಕೊಲೆಯಾದ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಾಗ ಮಗನಿಂದಲೇ ತಂದೆಯ ಕೊಲೆಯಾಗಿರೋದು ಪತ್ತೆಯಾಗಿದೆ. ತನಿಖೆಯ ವೇಳೆ ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂದು ತಂದೆಯನ್ನೇ ಮಗ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ.

ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು (60) ಕೊಲೆಯಾದ ವ್ಯಕ್ತಿ, ಆಟೋ ಚಾಲಕನಾಗಿದ್ದ ಮಗ ನೀಲಾಧರ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!