ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿದ್ದಾರೆ.
ಜೈಲಿಗೆ ಪತ್ನಿ ಹಾಗೂ ಪುತ್ರ ಬರುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದಾರೆ. ಈ ವೇಳೆ ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್ ಕಣ್ಣೀರು ಹಾಕಿದ್ದಾರೆ. ಅಳುತ್ತಲೇ ನಡೆದ ಘಟನೆಯ ಬಗ್ಗೆ ಮಾತಾಡಿದ್ದಾರೆ. ಅರ್ಧ ಗಂಟೆಯಲ್ಲಿ ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯ ಮಗನ ಜೊತೆಯೇ ದರ್ಶನ್ ಕಳೆದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.