ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾಗುವ ಮುನ್ನ ಫೇಲ್ ಆಗುವ ಭಯದಿಂದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ.
ನೆಲಮಂಗಲ ತಾ. ಬೆಟ್ಟಹಳ್ಳಿಯ ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ(16) ರಿಸಲ್ಟ್ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.
ಸುರೇಶ್ ಮತ್ತು ರೂಪ ದಂಪತಿ ಪುತ್ರ ಚಂದನ್ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ಪೊಲೀಸರಿಗೂ ಈ ಬಗ್ಗೆ ದೂರು ನೀಡಿದ್ದಾರೆ.