ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೋನಿಯಾ ಗಾಂಧಿಗೆ ಒಡಿಶಾ ಕಾಂಗ್ರೆಸ್ ನಾಯಕರೊಬ್ಬರು ಪತ್ರ ಬರೆದಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಪತ್ರದಲ್ಲಿ, ಪಕ್ಷದ ಸಂಘಟನಾತ್ಮಕ ಕುಸಿತ ಮತ್ತು ನಾಯಕತ್ವದ ವೈಫಲ್ಯಗಳ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ, ರಾಹುಲ್ ಗಾಂಧಿಯವರ ಲೋಪ ದೋಷಗಳನ್ನು ಎತ್ತಿ ತೋರಿಸಿದ್ದಾರೆ.
ಶಾಸಕನಾಗಿದ್ದರೂ, ಸುಮಾರು ಮೂರು ವರ್ಷಗಳ ಕಾಲ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಭಾರವಾದ ಹೃದಯದಿಂದ ಹೇಳಿಕೊಳ್ಳುತ್ತೇನೆ. ಇದು ವೈಯಕ್ತಿಕ ಅಸಮಾಧಾನವಲ್ಲ, ಬದಲಾಗಿ ಭಾರತದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅನುಭವಿಸುತ್ತಿರುವ ಪರಿಸ್ಥಿತಿ ಎಂದು ಹೇಳಿದ್ದಾರೆ.
ಬರಾಬತಿ-ಕಟಕ್ನ ಮಾಜಿ ಶಾಸಕ ಮೊಹಮ್ಮದ್ ಮೋಕಿಮ್ ಈ ಆರೋಪವನ್ನು ಮಾಡಿದ್ದಾರೆ.
ಬಿಹಾರ, ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಆಂತರಿಕ ಸಮಸ್ಯೆಗಳು ಕಾರಣ ಎಂದು ತಿಳಿಸಿದ್ದಾರೆ.
ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ಕಾರ್ಯಕರ್ತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿತ್ತು. ಆದರೆ ಇದೀಗ ಯುವ ಸಮೂಹ ಕಾಂಗ್ರೆಸ್ನಿಂದ ಹಿಂದೆ ಸರಿಯುತ್ತಿದೆ. ಕಾಂಗ್ರೆಸ್ ನಾಯಕತ್ವ ಮತ್ತು ಅದರ ತಳಮಟ್ಟದ ಕಾರ್ಯಕರ್ತರು ಹಾಗೂ ಭಾರತದ ಯುವಕರ ನಡುವೆ ಹೆಚ್ಚುತ್ತಿರುವ ಸಂಪರ್ಕ ಕಡಿತವನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಹಾರ, ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಆಂತರಿಕ ಸಮಸ್ಯೆಗಳು ಕಾರಣ ಎಂದು ಅವರು ಹೇಳಿದ್ದಾರೆ.
ಇಂದು, ಬೂತ್ ಕಾರ್ಯಕರ್ತರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಮಟ್ಟದ ನಾಯಕರು – ಅವರು ನಿಜವಾಗಿಯೂ ಪಕ್ಷದ ಬೆನ್ನೆಲುಬಾಗಿದ್ದಾರೆ. ಆದರೆ ಅವರನ್ನು ನಿರ್ಲಕ್ಷಿಸಲಾಗುತ್ತಿದೆ. ತಪ್ಪು ನಿರ್ಧಾರಗಳ ಸರಣಿ, ದಾರಿ ತಪ್ಪಿದ ನಾಯಕತ್ವದ ಆಯ್ಕೆಗಳು ಮತ್ತು ತಪ್ಪು ಕೈಯಲ್ಲಿ ಜವಾಬ್ದಾರಿಯ ನಿರಂತರ ಕೇಂದ್ರೀಕರಣವು ಪಕ್ಷವನ್ನು ಒಳಗಿನಿಂದ ದುರ್ಬಲಗೊಳಿಸಿದೆ. ಈ ದೋಷಗಳನ್ನು ಸರಿಪಡಿಸುವ ಬದಲು, ನಾವು ಅವುಗಳನ್ನು ಪುನರಾವರ್ತಿಸುತ್ತಿರುವಂತೆ ತೋರುತ್ತಿದೆ ಮತ್ತು ಅದರ ಪರಿಣಾಮಗಳು ಈಗ ಇಡೀ ರಾಷ್ಟ್ರಕ್ಕೆ ಗೋಚರಿಸುತ್ತಿವೆ ಎಂದು ಅವರು ಹೇಳಿದ್ದಾರೆ.

