ಮುಂದಿನ ಚುನಾವಣೆಗೆ ಟಿಕೆಟ್ ಸಿಕ್ಕಿದರೆ ಹಾವೇರಿಯಿಂದ ಪುತ್ರನ ಸ್ಪರ್ಧೆ: ಈಶ್ವರಪ್ಪ

ಹೊಸದಿಂತ ಡಿಜಿಟಲ್ ಡೆಸ್ಕ್:
ಪಕ್ಷ ಸ್ಪರ್ಧೆಯ ಅವಕಾಶ ನೀಡಿದಲ್ಲಿ ಮುಂದಿನ ಚುನಾವಣೆಗೆ ಪುತ್ರ ಕಾಂತೇಶ್ ಹಾವೇರಿಯಿಂದ ಸ್ಪರ್ಧಿಸಲಿದ್ದಾನೆ ಎಂದು ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಟಿಕೆಟ್‌ಗಾಗಿ ಪ್ರಯತ್ನ ಸಾಗಿದೆ ಎಂದರು.
ಕಾಂಗ್ರೆಸ್ ವಿರುದ್ಧ ಇದೇ ಸಂದರ್ಭ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಆಗಬಾರದು ಅಂತಾ ಕೋರ್ಟಿಗೆ ಹೋದವರು ಈಗ ಮೋದಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಮೊದಲು ಬಿಜೆಪಿಯವರು ರಾಮಮಂದಿರ ಕಟ್ಟಿಲ್ಲ ಅನ್ನುತ್ತಿದ್ದರು. ಈಗ ಪ್ರಿಯಾಂಕ್ ಖರ್ಗೆಯವರು ರಾಮಮಂದಿರ ಕಟ್ಟಾಯಿತು, ರಾಮರಾಜ್ಯ ಯಾವಾಗ? ಅಂತಾರೆ. ಇಂತಹ ಪ್ರಶ್ನೆಗಳಿಗೆಲ್ಲಾ ಉತ್ತರ ಕೊಡಬೇಕಿಲ್ಲ ಎಂದರು.
ಸಿದ್ದರಾಮಯ್ಯ ಅವರು ಅಹಿಂದ ಅಂತ ಹೋಗುತ್ತಿದ್ದರು. ಆದ್ರೆ ಹಿಂದುಳಿದವರು, ದಲಿತರು ಕೈಬಿಟ್ಟರು, ಇನ್ನು ಉಳಿದಿರೋದು ಅಲ್ಪಸಂಖ್ಯಾತರು ಮಾತ್ರ. ಅವರನ್ನೇ ಬಳಸಿಕೊಂಡು ರಾಜಕೀಯ ಮಾಡಬೇಕು ಅನ್ನೋದು ಸಿದ್ದರಾಮಯ್ಯರ ಲೆಕ್ಕ ಎಂದು ಲೇವಡಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!