ಹೊಸದಿಗಂತ ವರದಿ ಬೆಳಗಾವಿ:
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣಾ ಹಾಗೂ ಅದರ ಉಪನದಿಗಳ ಒಳಹರಿವು ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಯಾವುದೇ ಕ್ಷಣದಲ್ಲಾದರೂ ಬಿಡುಗಡೆಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಯನ ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಆಲಮಟ್ಟಿ ಜಲಾಶಯಕ್ಕೆ ಮಂಗಳವಾರ ಮುಂಜಾನೆ 1 ಲಕ್ಷ ಕ್ಯೂಸೆಕ್ಸ್ ಅಧಿಕ ನೀರಿನ ಒಳಹರಿವಿದ್ದು, ಸದ್ಯ 75 ಸಾವಿರ ಕ್ಯೂಸೆಕ್ ನೀರು ಜಲಾಶಯದಿಂದ ಹೊರಗಡೆ ಬಿಡಲಾಗಿದೆ. ಯಾವುದೇ ಕ್ಷಣದಲ್ಲಾದರೂ ನೀರಿನ ಹೊರ ಹರಿವು 1 ಲಕ್ಷ ಕ್ಯೂಸೆಕ್ಸ್ ಹೆಚ್ಚಾಗಬಹುದು ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯ ನೀರಿನ ಒಳ ಹರಿವು ಇನ್ನೂ ಹೆಚ್ಚಾಗುವ ಸಂಭವವಿದೆ.