ನಾಲಿಗೆ ಜಾರಿತು ಕ್ಷಮಿಸಿ: ರಾಷ್ಟ್ರಪತಿ ಮುರ್ಮು ಅವರಲ್ಲಿ ಕ್ಷಮೆಯಾಚಿಸಿದ ಕಾಂಗ್ರೆಸ್‌ ಸಂಸದ ಅಧೀರ್ ರಂಜನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ , ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ನಾಲಿಗೆ ಜಾರಿದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲದ ಪದವನ್ನ ಬಳಸಿದೆ . ಇದಕ್ಕಾಗಿ ವಿಷಾದಿಸಿದ್ದು, ರಾಷ್ಟ್ರಪತಿಗಳ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
‘ನಾಲಿಗೆ ಜಾರುವಿಕೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ಕ್ಷಮೆಯಾಚಿಸುತ್ತೇನೆ ಮತ್ತು ಅದನ್ನ ಸ್ವೀಕರಿಸುವಂತೆ ವಿನಂತಿಸುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರ ಪ್ರತಿಕ್ರಿಯಿಸಿದ ಚೌಧರಿ, ಬಿಜೆಪಿ ನನ್ನನ್ನ ಭಯೋತ್ಪಾದಕ ಎಂದು ಕರೆಯಲು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ನನ್ನನ್ನು ಬಂಧಿಸಲು ಕಾಯುತ್ತಿದ್ದೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!