ಸೌಂದರ್ಯ ಜಗದೀಶ್ ಅಂತಿಮ ದರುಶನ ಪಡೆದ ಚಿತ್ರರಂಗದ ಗಣ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್‌ವುಡ್‌ ಗಣ್ಯರು ಜಗದೀಶ್‌ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.

ನಟ ದರ್ಶನ್​ (Darshan) ಸೇರಿದಂತೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರುಶನ ಪಡೆದಿದ್ದಾರೆ.

ಸೋಮವಾರ (ಏಪ್ರಿಲ್​ 15) ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 9 ಗಂಟೆವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೌಂದರ್ಯ ಜಗದೀಶ್​ ಅವರ ನಿಧನದಿಂದ ಚಿತ್ರರಂಗಕ್ಕೆ ಆಘಾತ ಉಂಟಾಗಿದೆ.

ಉದ್ಯಮಿ ಆಗಿದ್ದ ಸೌಂದರ್ಯ ಜಗದೀಶ್​ ಅವರು ನಂತರ ಸಿನಿಮಾದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಚಿತ್ರರಂಗದ ಹಲವರ ಜೊತೆ ಅವರು ಒಡನಾಟ ಹೊಂದಿದ್ದರು. ಇಂದು ಶ್ರೀಮುರಳಿ, ದರ್ಶನ್​, ಉಪೇಂದ್ರ, ಗುರುಕಿರಣ್​, ತರುಣ್​ ಸುಧೀರ್​, ಸಾರಾ ಗೋವಿಂದು, ಕೆ. ಮಂಜು ಮುಂತಾದವರು ಬಂದು ಸೌಂದರ್ಯ ಜಗದೀಶ್​ ಅವರ ಅಂತಿಮ ದರುಶನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here