ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Saurav Ganguly) ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ನಬನ್ನಾದಲ್ಲಿರುವ ಸಿಎಂ ಕಚೇರಿಗೆ ಆಗಮಿಸಿದ ಗಂಗೂಲಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಇದೀಗ ಈ ಭೇಟಿ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈ ಭೇಟಿಯ ಉದ್ದೇಶವೇನು ಎಂಬುದನ್ನು ಕೂಡ ಪ್ರತಿಕ್ರಿಯೆ ನೀಡಲು ಸೌರವ್ ಗಂಗೂಲಿ ಕೂಡ ನಿರಾಕರಿಸಿದ್ದಾರೆ.
ಸೌರವ್ ಗಂಗೂಲಿ ಪಶ್ಚಿಮ ಬಂಗಾಳ ಸಿಎಂ ಅವರ ಕಚೇರಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು.
ಈಗಾಗಲೇ ಅನೇಕ ಸಲ ದಾದಾ ಕ್ರಿಕೆಟ್ ಬಿಟ್ಟು ರಾಜಕೀಯ ಸೇರಲಿದ್ದಾರೆ ಎಂಬ ಊಹಾಪೋಹಗಳು ಪಶ್ಚಿಮ ಬಂಗಾಳದಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರ ಭೇಟಿ ಕುತೂಹಲ ಮೂಡಿಸಿದೆ.