ಮಲೇಷ್ಯಾಗೆ ಸ್ಪೀಕರ್ ಖಾದರ್: ಕರ್ನಾಟಕ ಜೊತೆ ಸಂಸದೀಯ ವ್ಯವಹಾರ, ಸಾಂಸ್ಕೃತಿಕ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಯನಕ್ಕಾಗಿ ಮಲೇಷಿಯಾ ಪ್ರವಾಸ ಕೈಗೊಂಡಿದ್ದಾರೆ.

ಅಲ್ಲಿ ಅವರು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್, ಮಲೇಷಿಯಾದ ಜಂಟಿ ಅಧ್ಯಕ್ಷ ಡಾ. ಜೋಹಾರಿ ಬಿನ್ ಅಬ್ದುಲ್ ಅವರನ್ನು ಕೌಲಾಲಂಪುರದ ಸಂಸತ್ ಭವನದಲ್ಲಿ ಭೇಟಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಉಭಯ ನಾಯಕರು ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು. ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಷಿಯಾದ ರಾಜಕೀಯ ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!